Wednesday 8 July 2015

ಕೃಷ್ಣರಾಜಸಾಗರ



ಕೃಷ್ಣರಾಜಸಾಗರ ಮೈಸೂರಿನ ಬಳಿ ಕಾವೇರಿ ನದಿಗೆ ಅಡ್ಡಲಾಗಿ ಕಟ್ಟಿರುವ ಅಣೆಕಟ್ಟು. ಈ ಅಣೆಕಟ್ಟಿನ ಜೊತೆಗೇ ನಿರ್ಮಿಸಲಾದ ಬೃಂದಾವನ ಉದ್ಯಾನ ಉತ್ತಮವಾದ ಪ್ರವಾಸಿ ಆಕರ್ಷಣೆ. ಮೈಸೂರು ಮತ್ತು ಮಂಡ್ಯ ಜಿಲ್ಲೆಗಳ ಜೀವನದಿಯಾದ ಕಾವೇರಿ ನದಿಗೆ ಅಡ್ಡಲಾಗಿ ಈ ಅಣೆಕಟ್ಟನ್ನು ಕಟ್ಟಲಾಗಿದೆ. ಮೈಸೂರಿನ ದಿವಾನರಾಗಿದ್ದ ಮೋಕ್ಷಗುಂಡಂ ವಿಶ್ವೇಶ್ವರಾಯ ಈ ಅಣೆಕಟ್ಟನ್ನು ಕಟ್ಟಿಸಿದ ಇಂಜಿನಿಯರರಲ್ಲಿ ಪ್ರಮುಖರು. ಈ ಅಣೆಕಟ್ಟು ೮೬೦೦ ಅಡಿ ಉದ್ದವಿದ್ದು ೧೩೦ ಅಡಿ ಎತ್ತರವಿದೆ. ಸ್ವಯಂಚಾಲಿತ ಸ್ಲ್ಯೂಸ್ ಗೇಟ್ ಗಳನ್ನು ಉಪಯೋಗಿಸಿದ ಪ್ರಪಂಚದ ಮೊದಲ ಅಣೆಕಟ್ಟುಗಳಲ್ಲಿ ಇದೂ ಒಂದು.

No comments:

Post a Comment

Thanking You For Your Valuable Comment. Keep Smile